PM Kisan Samman Nidhi 17th Instalment : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರನೇ ಅವಧಿಯ ಅಧಿಕಾರವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಲಕ್ಷಾಂತರ ರೈತರಿಗೆ ಅದ್ಭುತ ಉಡುಗೊರೆಯನ್ನು ನೀಡಿದ್ದಾರೆ. ಸೋಮವಾರ, ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತನ್ನು ರೈತರ ಖಾತೆಗಳಿಗೆ ವರ್ಗಾಯಿಸುವ ಪ್ರಸ್ತಾವನೆಗೆ ಪ್ರಧಾನಿ ಸಹಿ ಹಾಕಿದರು.ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯ 17ನೇ ಕಂತನ್ನು ಮೊದಲ ದಿನವೇ ಬಿಡುಗಡೆ ಮಾಡಿದ ಪ್ರಧಾನಮಂತ್ರಿ 20,000 ಕೋಟಿ ರೂ.ರಿಲೀಸ್ ಮಾಡಲು ಸಹಿ ಮಾಡಿದ್ದಾರೆ.
PM Kisan Samman Nidhi 17th Instalment
ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೊದಲ ದಿನವೇ ದೇಶಾದ್ಯಂತ ಲಕ್ಷಾಂತರ ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತನ್ನು ಬಿಡುಗಡೆ ಮಾಡುವ ದಾಖಲೆಗೆ ಸಹಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರನೇ ಅವಧಿಯಲ್ಲಿ ಮೊದಲ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಅಧಿಕೃತ ಹೇಳಿಕೆ ಸೋಮವಾರ ತಿಳಿಸಿದೆ. ಹೇಳಿಕೆಯ ಪ್ರಕಾರ, ಈ ನಿರ್ಧಾರದಿಂದ ದೇಶದ 9.3 ಕೋಟಿ ರೈತರು ಪ್ರಯೋಜನ ಪಡೆಯಲಿದ್ದಾರೆ.ಇ-ಕೆವೈಸಿ ಮಾಡಿಸಿಕೊಳ್ಳುವುದು ಅವಶ್ಯಕ
“ನಮ್ಮದು ರೈತರ ಕಲ್ಯಾಣ್ಗೆ ಸಂಪೂರ್ಣ ಬದ್ಧವಾಗಿರುವ ಸರ್ಕಾರವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತವು ರೈತ ಕಲ್ಯಾಣಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತವಾಗಿದೆ. ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಈ ಸಮಯದಲ್ಲಿ ಇನ್ನಷ್ಟು ಕೆಲಸ ಮಾಡಲು ಬಯಸುತ್ತೇವೆ..” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Read More
8th Pay Commission :ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ನ್ಯೂಸ್ !8 ನೇ ವೇತನ ಆಯೋಗದಿಂದ ವೇತನ ಹೆಚ್ಚಳ!
Yeshasvini scheme :ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್ !ಈ ಲಾಭಗಳು ಇನ್ನು ಮುಂದೆ ಸಿಗಲಿವೆ
Smart Cylinder :ಈ ಸಿಲಿಂಡರ್ ಗ್ಯಾಸ್ ಹಾಕಿಸಿದರೆ ಸ್ಫೋಟದ ಭಯವೇ ಬೇಡ!ಗ್ಯಾಸ್ ಎಷ್ಟಿದೆ ಎಂಬುದು ಕಾಣಲಿದೆ